• Home
  • News
  • More
    • Home
    • News
  • Home
  • News

ಆರಕ್ಷಕವಾಣಿ ನ್ಯೂಸ್

ಆರಕ್ಷಕವಾಣಿ ನ್ಯೂಸ್ಆರಕ್ಷಕವಾಣಿ ನ್ಯೂಸ್ಆರಕ್ಷಕವಾಣಿ ನ್ಯೂಸ್

Breaking News in Pictures: The Most Powerful Images from Today's Headlines

    ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ

    ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ

    ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ

    ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ 



    ತರೀಕೆರೆ ಪೊಲೀಸರ ಕಾರ್ಯಾಚರಣೆ. ಪರಾರಿಯಾಗಿದ್ದ ಕೊಲೆ ಆರೋಪಿಗಳ ಬಂಧನ.    ದಿನಾಂಕ 1 26ರಂದು ರಾತ್ರಿ ಎರಡು ಗಂಟೆಯ ಸಮಯದಲ್ಲಿ ಕೋಟೇಶ್ ಎಂ ಬಿನ್ ಲೇಟ್ ಮೈಲಾರಪ್ಪ ರವರು ತರೀಕೆರೆ ತಾಲೂಕು ಲಿಂಗದಹಳ್ಳಿ ಹೋಬಳಿ ಹೊಡೆಯುವ ಗ್ರಾಮದವರು. ನೀಡಿದ ದೂರಿನ ಆಧಾರದ ಮೇಲೆ ದಿನಾಂಕ 31 12/2025 ರಂದು ಹುಡುಗಿಯ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ ವಿಚಾರಕ್ಕೆ ರಾತ್ರಿ ಸರಿಸುಮಾರು 10.45 ರ ಸಮಯದಲ್ಲಿ ಆರೋಪಿಗಳಾದ ಕಿರಣ್ ಮತ್ತು ಮನು ಹಾಗೂ ಇತರರು ಸೇರಿ ಅತ್ತಿಗನಾಳು ಕಡೆಗೆ ಹೋಗುವ ಬೈಪಾಸ್ ಹತ್ತಿರ ಮಂಜುನಾಥ್ 21 ವರ್ಷ ರವರಿಗೆ ಏಕಾಏಕಿ ಕೊಲೆ ಮಾಡುವ ಉದ್ದೇಶದಿಂದ ಕೈಯಲ್ಲಿದ್ದ ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಪರಾರಿ ಯಾಗಿದ್ದರು. ಗಾಯಾಳುವಾಗಿದ್ದ ಮಂಜುನಾಥನು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುತ್ತಾನೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಮಾನ್ಯ ಪೋಲಿಸ್ ಅಧೀಕ್ಷಕರು ಚಿಕ್ಕಮಗಳೂರು ಹಾಗೂ ತರೀಕೆರೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ಅದರಂತೆ ತಂಡವು ಆರೋಪಿಗಳಾದ ಕಿರಣ್ 19 ವರ್ಷ ಮತ್ತು ಮನು 21 ವರ್ಷ ಇವರನ್ನು ತರೀಕೆರೆ ಟೌನ್ ಪೋಲಿಸರು ಬಂಧಿಸಿರುತ್ತಾರೆ. ಈ ಕಾರ್ಯಾಚರಣೆಯು ಶ್ರೀ ಜಿತೇಂದ್ರ ಕುಮಾರ್ ದಯಾಮ ಪೊಲೀಸ್ ಅಧಿಕಾರಿ ಚಿಕ್ಕಮಗಳೂರು ಹಾಗೂ ಶ್ರೀ ಸಿಟಿ ಜಯಕುಮಾರ್ ಹೆಚ್ಚುವರಿ ಪೋಲಿಸ್ ಅಧ್ಯಕ್ಷರು ಚಿಕ್ಕಮಗಳೂರು ಹಾಗೂ ಶ್ರೀ ಪರಶುರಾಮಪ್ಪ ಮಾನ್ಯ ಪೋಲಿಸು ಉಪ ದೀಕ್ಷಕರು ತರೀಕೆರೆ ರವರುಗಳ ಮಾರ್ಗದರ್ಶನದಲ್ಲಿ ತರೀಕೆರೆಯ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಮಚಂದ್ರ ನಾಯಕ್ ಪಿಎಸ್ಐ ಗಳಾದ ನಾಗೇಂದ್ರ ನಾಯಕ್, ಆನಂದ ಪಾವಸ್ಕರ್, ಮಂಜುನಾಥ್ ಮನ್ನಂಗಿ, ದೇವೇಂದ್ರ ರಾಥೋಡ್, ಮತ್ತು ಏ ಎಸ್ ಐ ರವಿ ಹಾಗೂ ಸಿಬ್ಬಂದಿಗಳಾದ ರಫೀಕ್, ವೇಣುಗೋಪಾಲ್, ರಿಯಾಜ್, ಕಿರಣ್ ಕುಮಾರ್, ರಾಜೇಶ ಪಿ, ಮೋಹನ್, ಶಿವಕುಮಾರ್, ವಿಶೇಷ ತಂಡವನ್ನು ರಚಿಸಿ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು  ಶ್ರೀನಿವಾಸ್, ಹಾಗೂ ಜಿಲ್ಲಾ ಕಛೇರಿ ತಾಂತ್ರಿಕ ಸಿಬ್ಬಂದಿ ರಬ್ಬಾನಿ ರವರುಗಳು ವಿವಿಧ ಆಯಾಮದಿಂದ ಮಾಹಿತಿಯನ್ನು ಸಂಗ್ರಹಿಸಿಕೊಂಡು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಇವರುಗಳನ್ನು ಮಾನ್ಯ ಪೊಲೀಸ್ ಅಧಿಕರು ಚಿಕ್ಕಮಗಳೂರು ರವರು ಈ ತಂಡದ ಕಾರ್ಯವನ್ನು ಸ್ಲಾಗಿಸಿದ್ದಾರೆ.

    ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತಿಸಿದ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ

    ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ

    ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ

    ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತಿಸಿದ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ 

    ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದವತಿಯಿಂದ ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತಿಸಿ,

     ಶುಭಕೋರಿ ಹಾಗೂ ಸಹಕಾರಿ ಸಂಘದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರಿಗೆ ಬೀದ‌ರ್ ಮಾದರಿ

     ಸಹಕಾರಿ ಸಂಘದ ನಿಯಮಾವಳಿಗಳು ನೌಕರರ ಹಿತವಾಗಿದ್ದು,ಆದರೆ ಉಪಸಮಿತಿ ರಚನೆ

     ಮಾಡಿರುವ ಸಹಕಾರಿ ಸಂಘದ ನಿಯಮಾವಳಿಗಳು ನೌಕರರ ವಿರುದ್ಧ ವಾಗಿದ್ದು ಜಿಲ್ಲಾಧಿಕಾರಿ 

    ಅವರಿಗೆ ಮನವಿ ನೀಡಿ ಮಾನ್ಯ ಮುಖ್ಯಮಂತ್ರಿ ಅವರಿಗೆ ಸಲ್ಲಿಸುವಂತೆ ಮನವಿ ನೀಡಲಾಯಿತು.

    ಜಿಲ್ಲಾಧ್ಯಕ್ಷರಾದ ಮಂಜು ತರಿಕೆರೆ, ಸಂಘಟನ ಸಂಚಾಲಕರು ಪ್ರದೀಪ್‌, ನಿರ್ದೇಶಕರುಗಳಾದ ದಶರ್ನ, ರಾಕೇಶ್‌,ನಾಗರಾಜು ಇದ್ದರು.


    3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಯಶಸ್ವಿ

    ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ

    ತರೀಕೆರೆಯಲ್ಲಿ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು --ಜಿ ಎಚ್ ಶ್ರೀನಿವಾಸ್....

    3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಯಶಸ್ವಿಯಾಗಿ ನಡೆದ  ಬಗ್ಗೆ,


        ಕರಾಟೆ ಕ್ರೀಡೆಯ, ಆತ್ಮವಿಶ್ವಾಸ, ಶಿಸ್ತು ಮತ್ತು ಕ್ರೀಡಾತ್ಮಕತೆಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ - 3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಪಂದ್ಯಾವಳಿಯು  –2026 ಜನವರಿ 11 ರಂದು ,ಶಿವಮೊಗ್ಗ ಜಿಲ್ಲೆಯ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.


       ಸಹ್ಯಾದ್ರಿ ಶಿವಮೊಗ್ಗ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ *ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ನವೀನ್,  ಉಪಾಧ್ಯಕ್ಷರಾದ ಶ್ರೀಯುತ ಸನ್ ಸೈ  ಸಾಧಿಕ್, ಶ್ರೀಯುತ ಸನ್ ಸೈ ಮಂಜುನಾಥ್ ,*  ರವರು ಆಯೋಜಿಸಲಾದ ಈ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 1,000 ಕ್ಕೂ ಹೆಚ್ಚು ಕರಾಟೆ ಕ್ರೀಡಾಪಟುಗಳು ಭಾಗವಹಿಸಿದ್ದರು. ತಮಿಳುನಾಡು, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಸ್ಪರ್ಧಾಳುಗಳು  ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಭಾಗವಹಿಸಿ   ತಮ್ಮ ಅತ್ಯುತ್ತಮ ಕೌಶಲ್ಯ, ಶಿಸ್ತು ಮತ್ತು ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು. ಹಾಗೂ ವಿಜೇತರಾದಂತಹ ಕ್ರೀಡಾಪಟುಗಳಿಗೆ ಟ್ರೋಫಿ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಯಿತು.


    ಈ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಶ್ರೀಯುತ.ಡಿ.ಎಸ್.ಅರುಣ್  ಅವರು ಅಧಿಕೃತವಾಗಿ ಉದ್ಘಾಟಿಸಿ ತಮ್ಮ  ಹಿತ ನುಡಿಗಳನ್ನು ನುಡಿದರು ಮಾತು ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ  ಅಧ್ಯಕ್ಷರಾದ ಶ್ರೀಯುತ ಕಲಗೋಡು ರತ್ನಾಕರ್, DSP ರಾಚಪ್ಪ, ನ್ಯೂಸ್  ವಾರಿಯರ್ಸ್  ಸಂಪಾದಕರಾದ ಶ್ರೀಯುತ ರಘುರಾಜ್ ,  ಮಮಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ , ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ವಾಸುದೇವ್, ಶ್ರೀಯುತ ಡಾ. ಶಿಹಾನ್ ಎ .ಝೆಡ್ ಮುಹಿಬ್ ರವರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ರೆಫ್ರೀ ಕಮಿಷನರ್ ಸನ್ ಸೈ .ಕೆ.ಪಿ.ಜೊಸ್, ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ಜಿತೇಂದ್ರ ಕಾಕಟೇಕರ್, ಹಾವೇರಿ ಜಿಲ್ಲೆಯ ಅಧ್ಯಕ್ಷರಾದ     ಶ್ರೀಯುತ  ಶಿಹಾನ್  ನಾರಾಯಣ್ ಪೂಜಾರ್ , ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ  ಎನ್ ಮಾಲತೇಶ್,  ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಮತ್ತು ಅನೇಕ ಗಣ್ಯರು ಉಪಸ್ಥಿತರಿದು ,ಅತಿಥಿಗಳಾಗಿ ಭಾಗವಹಿಸಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ- ಉತ್ತೇಜನ ನೀಡಿ  ಗೌರವವನ್ನು ತಂದರು.


    ಸ್ಪರ್ಧೆಯು ಅತ್ಯಂತ ಶಿಸ್ತುಬದ್ಧವಾಗಿ, ನ್ಯಾಯಸಮ್ಮತವಾಗಿ ಹಾಗೂ ಉತ್ಸಾಹಭರಿತವಾಗಿ ನಡೆಯಿತು. ಕ್ರೀಡಾಪಟುಗಳ ಪ್ರದರ್ಶನ ಪ್ರೇಕ್ಷಕರನ್ನು ಆಕರ್ಷಿಸಿದ್ದು, ಕರಾಟೆ ಕ್ರೀಡೆಯ ಮಹತ್ವವನ್ನು ಮತ್ತಷ್ಟು ಬೆಳಗಿಸಿತು. ಈ ಚಾಂಪಿಯನ್‌ಶಿಪ್ ಕೇವಲ ಸ್ಪರ್ಧೆಯಷ್ಟೇ ಅಲ್ಲದೆ, ಏಕತೆ, ಶ್ರೇಷ್ಠತೆ ಮತ್ತು ಕ್ರೀಡಾತ್ಮಕ ಮನೋಭಾವವನ್ನು ಉತ್ತೇಜಿಸುವ ಹಬ್ಬವಾಗಿ ಮೂಡಿಬಂದಿತು. 


    ಈ ಕ್ರೀಡಾಕೂಟಕ್ಕೆ ಮೈಸೂರು ಜಿಲ್ಲೆಯಿಂದ ಆಗಮಿಸಿದಂತಹ ಸನ್ ಸೈ ಸೌಜನ್ಯ ಮತ್ತು ಸನ್ ಸೈ ಮನೋಜ್ ಹಾವೇರಿ ಜಿಲ್ಲೆಯ ಸನ್ ಸೈ ಮೋನಿಷಾ ,ದಾವಣಗೆರೆ ಜಿಲ್ಲೆಯ ಸನ್ ಸೈ ಗೌತಮ್, ಹಾವೇರಿ  ಜಿಲ್ಲೆಯ ಸನ್ ಸೈ ಮಂಜುನಾಥ್,ಮೈಸೂರು ಜಿಲ್ಲೆಯಿಂದ ಸನ್ ಸೈ ನವೀನ್ , ದಾವಣಗೆರೆ ಜಿಲ್ಲೆಯ ಸನ್ ಸೈ ವೆಂಕಟೇಶ್ ಮತ್ತು  ಸನ್ ಸೈ ಅನಿಲ್, ಬಿಜಾಪುರ್ ಜಿಲ್ಲೆಯ ಪ್ರೇಮ್,  ಶಿವಮೊಗ್ಗ ಜಿಲ್ಲೆಯ ಸನ್ ಸೈ ಚಂದ್ರಕಾಂತ, ಸನ್ ಸೈ ಮಹಾಬಲೇಶ್ ಜ್ಯೋಯಿಶ್, ಸನ್ ಸೈ ಸತೀಶ್ ಮತ್ತು ಇನ್ನೂ ಹಲವು ಜಿಲ್ಲೆಯವರ ಕರಾಟೆ ಶಿಕ್ಷಕರು ಕ್ರೀಡಾಪಟುಗಳೊಂದಿಗೆ ಸಹಕಾರವನ್ನು ನೀಡಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುತ್ತಾರೆ.


    ಈ ಯಶಸ್ವಿ ಆಯೋಜನೆಗೆ ಸಹಕಾರ ನೀಡಿದ ಎಲ್ಲಾ ಕ್ರೀಡಾಪಟುಗಳು, ತರಬೇತುದಾರರು, ತೀರ್ಪುಗಾರರು, ಸ್ವಯಂಸೇವಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಕ್ರೀಡಾಭಿಮಾನಿಗಳಿಗೆ.


     ಈ ಪಂದಾವಳಿಯನ್ನು ಆಯೋಜಿಸಿದ ಸಹ್ಯಾದ್ರಿ ಶಿವಮೊಗ್ಗ ಜಿಲ್ಲೆಯ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ *ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ನವೀನ್,  ಉಪಾಧ್ಯಕ್ಷರಾದ ಶ್ರೀಯುತ ಸನ್ ಸೈ  ಸಾಧಿಕ್, ಶ್ರೀಯುತ ಸನ್ ಸೈ ಮಂಜುನಾಥ್ ,* ಸನ್ ಸೈ ಕಿರಣ್, ಸನ್ ಸೈ ಸತೀಶ್, ನವೀನ್ ಪ್ರಕಾಶ್, ಅಪೂರ್ವ, ದೀಕ್ಷಾ, ಮೊಹಮ್ಮದ್ ಗೌಸ್, ಆಶಿಕ್ , ಪೃಥ್ವಿ  ,ರಕ್ಷಿತ್ ಹೊಳ್ಳ , ಮೋನಿಕಾ, ಮಧು, ಗಿರೀಶ್ ರವರು ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸಿರುತ್ತಾರೆ .

    ತರೀಕೆರೆಯಲ್ಲಿ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು --ಜಿ ಎಚ್ ಶ್ರೀನಿವಾಸ್....

    ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆ &ಕೃಷಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಕೆ ಸಚಿವ ಕೆ.ಜೆ.ಜಾರ್ಜ್‌

    ತರೀಕೆರೆಯಲ್ಲಿ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು --ಜಿ ಎಚ್ ಶ್ರೀನಿವಾಸ್....

     ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು --ಜಿ ಎಚ್ ಶ್ರೀನಿವಾಸ್......................

     ತರೀಕೆರೆ, ಜ,13 -- ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿವರ್ಷದಂತೆ ಈ ಬಾರಿಯೂ ವಿಜೃಂಭಣೆಯಿಂದ ಗಣರಾಜ್ಯೋತ್ಸವ 

    ಆಚರಿಸಬೇಕು ಎಂದು ಶಾಸಕ ಜಿಎಚ್ ಶ್ರೀನಿವಾಸ್ ಹೇಳಿದರು. ಅವರು ಇಂದು ಪಟ್ಟಣದ 

    ಆಡಳಿತ ಸೌಧ ದ ತಹಶೀಲ್ದಾರ್ ರವರ ಸಭಾಂಗಣದಲ್ಲಿ  ದಿನಾಂಕ 26-01-2026 ರಂದು 

    ಗಣರಾಜ್ಯೋತ್ಸವ ಆಚರಿಸಲು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

     ಕಾರ್ಯಕ್ರಮ ನಡೆಯುವ ಬಯಲು ರಂಗ ಮಂದಿರದಲ್ಲಿ ಧ್ವಜಾರೋಹಣ,ಆರಕ್ಷಕ ಇಲಾಖೆ

    , ಹೋಮ್ ಗಾರ್ಡ್ಸ್, ಅರಣ್ಯ ಇಲಾಖೆ ಸಿಬ್ಬಂದಿಗಳು,ಅಬಕಾರಿ ಇಲಾಖೆ ಸಿಬ್ಬಂದಿಗಳು, ಪೌರಕಾರ್ಮಿಕರು,

     ಶಾಲಾ ಮಕ್ಕಳಿಂದ ಪತಸಂಚಲನ ನಡೆಸುವಂತೆ ಸ್ತಬ್ಧ  ಚಿತ್ರಗಳು, ನೃತ್ಯ ರೂಪಕಗಳು, ಜೊತೆಗೆ

     ಸಾಧಕರಿಗೆ ಸನ್ಮಾನ ಏರ್ಪಡಿಸಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ನಾಡಹಬ್ಬಗಳ ಸಮಿತಿ 

    ಅಧ್ಯಕ್ಷರಾದ ತಹಸಿಲ್ದಾರ್ ವಿಶ್ವಜಿತ್ ಮೆಹತ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಉಪವಿಭಾಗಾಧಿ

    -ಕಾರಿಗಳಾದ ಎನ್ ವಿ ನಟೇಶ್ ಹಾಗೂ ಡಿ ಎಸ್ ಪಿ, ಎಚ್ ಪರಶುರಾಮಪ್ಪ ರವರು ಹಾಗೂ ನೌಕರರ 

    ಸಂಘದ ಅಧ್ಯಕ್ಷರಾದ ಅನಂತಪ್ಪ ರವರು ಉಪಸಿತರಿದ್ದು ಮಿಲ್ಟ್ರಿ ಶ್ರೀನಿವಾಸ್ ಪತ್ರಕರ್ತರಾದ ಎಸ್ ಕೆ 

    ಸ್ವಾಮಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ಮತ್ತು ಕಾರ್ಯನಿರ್ವಹಣಾಧಿಕಾರಿ ಡಾ. ದೇವೇಂದ್ರಪ್ಪ ತೋಟಗಾರಿಕಾ ಇಲಾಖೆ ಅಧಿಕಾರಿ, ಕೃಷಿ ಇಲಾಖೆ ಅಧಿಕಾರಿ

    ,ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆಯ ಅಧಿಕಾರಿಗಳು, ಎಲ್ಲಾ ಇಲಾಖೆಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆ &ಕೃಷಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಕೆ ಸಚಿವ ಕೆ.ಜೆ.ಜಾರ್ಜ್‌

    ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆ &ಕೃಷಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಕೆ ಸಚಿವ ಕೆ.ಜೆ.ಜಾರ್ಜ್‌

    ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆ &ಕೃಷಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಕೆ ಸಚಿವ ಕೆ.ಜೆ.ಜಾರ್ಜ್‌

    ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು 


    *ಬೆಂಗಳೂರು, ಜನವರಿ 9, 2026*: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ  ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


    ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂನ ಬೆಳಕು ಭವನದಲ್ಲಿ ಶುಕ್ರವಾರ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಇಲಾಖೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, "ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮನ್ವಯತೆ ಸಾಧಿಸಲು ಅಗತ್ಯವಿರುವ ವಿದ್ಯುತ್ ಉತ್ಪಾದನೆ ಮತ್ತು ಖರೀದಿಗೆ ಕ್ರಮ ಕೈಗೊಳ್ಳಬೇಕು," ಎಂದು ತಿಳಿಸಿದರು.


    "ಬೇಸಿಗೆಯಲ್ಲಿ ಅದರಲ್ಲೂ ಮುಖ್ಯವಾಗಿ ಮಾರ್ಚ್‌ನಿಂದ ಮೇ ಅಂತ್ಯದವರೆಗೆ ಮೂರು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಎಷ್ಟಾಗಬಹುದು ಎಂಬುದನ್ನು ಈಗಲೇ ಲೆಕ್ಕಾಚಾರ ಮಾಡಿ ಅದಕ್ಕೆ ತಕ್ಕಂತೆ ಪೂರೈಸಲು ವಿದ್ಯುತ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು.  ಹಗಲು ವೇಳೆ ಸೌರ ವಿದ್ಯುತ್ ಹೇರಳವಾಗಿ ಲಭ್ಯವಿರುವುದರಿಂದ ಅದನ್ನು ಬಳಸಿಕೊಂಡು ರಾತ್ರಿ ವೇಳೆ ಜಲ ಮತ್ತು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಪೂರೈಕೆ ಉತ್ಪಾದನೆಯಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು," ಎಂದು ಹೇಳಿದರು.


    "ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ವಿನಿಮಯ ಅಥವಾ ದೀರ್ಘಾವಧಿ ಖರೀದಿ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಪಡೆಯಲು ಹಾಗೂ ಸಕ್ಕರೆ ಜತೆಗೆ ವಿದ್ಯುತ್ ಉತ್ಪಾದನೆ ಮಾಡುವ ಕಾರ್ಖಾನೆಗಳೊಂದಿಗೆ ಈಗಲೇ ಒಪ್ಪಂದ ಮಾಡಿಕೊಳ್ಳಬೇಕು. ಇದರಿಂದ ಬೇಸಿಗೆಯಲ್ಲಿ ಹೆಚ್ಚುವರಿ ವಿದ್ಯುತ್ ಲಭ್ಯವಾದರೆ ಬೇರೆ ರಾಜ್ಯಗಳಿಗೆ ಮಾರಾಟ ಮಾಡಬಹುದು. ಆದರೆ, ಯಾವುದೇ ಕಾರಣಕ್ಕೂ ಕೊರತೆ ಉಂಟಾಗಬಾರದು," ಎಂದರು.


    *ಕೃಷಿಗೆ ಹಗಲು 7 ಗಂಟೆ ವಿದ್ಯುತ್*: 

    "ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕುಸುಮ್- ಸಿ ಯೋಜನೆಯಡಿ ಫೀಡ್ ಸೋಲರೈಸೇಷನ್ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಸಲಾಗುತ್ತಿದೆ. ಪ್ರಸ್ತುತ ಸೌರ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವುದರಿಂದ ಇತರೆ ಭಾಗಗಳಲ್ಲೂ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು," ಎಂದು ಸಚಿವರು ನಿರ್ದೇಶನ ನೀಡಿದರು.


    ಪಿಸಿಕೆಎಲ್ ಅಧಿಕಾರಿಗಳು ಮಾಹಿತಿ ನೀಡಿ, "ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಸೆಂಬರ್ ತಿಂಗಳಲ್ಲಿ ದಾಖಲೆಯ 17,220 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಬಂದಿದ್ದು,ಸಮರ್ಪಕವಾಗಿ ಪೂರೈಕೆ ಮಾಡಲಾಗಿದೆ. ಈ ಬಾರಿಯ ಬೇಸಿಗೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 5ರಷ್ಟು ಹೆಚ್ಚುವರಿ ವಿದ್ಯುತ್ ಬೇಡಿಕೆ ನಿರೀಕ್ಷಿಸಲಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೇಡಿಕೆ ಅವಧಿಯಲ್ಲಿ ಅಂದರೆ ಬೆಳಗ್ಗೆ ಮತ್ತು ಸಂಜೆ ಜಲ ವಿದ್ಯುತ್ ಮತ್ತು ಉಷ್ಣ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುವುದು." ಎಂದು ತಿಳಿಸಿದರು.


    "ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಜುಲೈ ಅಂತ್ಯದವರೆಗೆ ಪ್ರತಿನಿತ್ಯ 33 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಬಹುದು. ಅದೇ ರೀತಿ ರಾಯಚೂರು, ಯರಮರಸ್ ಮತ್ತು ಬಳ್ಳಾರಿಯ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿರುವ ಘಟಕಗಳನ್ನೂ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಉತ್ಪಾದಿಸಲು ಅನುವಾಗುವಂತೆ ಸಿದ್ಧಗೊಳಿಸಲಾಗುತ್ತಿದೆ. ಜತೆಗೆ ನವೀಕರಿಸಬಹುದಾದ ಇಂಧನ ಮೂಲಗಳಿಂದಲೂ ಸಾಕಷ್ಟು ವಿದ್ಯುತ್ ಉತ್ಪಾದಿಸಲಾಗುತ್ತಿದೆ," ಎಂದು ವಿವರಿಸಿದರು.


    ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಕೃಷ್ಣ ಬಾಜಪೇಯಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್.ಜಯಕುಮಾರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ ರಾಜು, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು.


    *ಕೋಟ್*-


    "ಲಭ್ಯ ವಿದ್ಯುತ್ತನ್ನು ಸಮರ್ಪಕ ರೀತಿಯಲ್ಲಿ ಪ್ರಸರಣ ಮತ್ತು ಸರಬರಾಜು ಮಾಡಲು ಅಗತ್ಯ ಮೂಲ ಸೌಕರ್ಯಗಳನ್ನು ಈಗಲೇ ಸಿದ್ಧ ಮಾಡಿಕೊಳ್ಳಬೇಕು. ಓವರ್ ಲೋಡ್ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳೇಕು. ಲಿಂಕ್ ವ್ಯವಸ್ಥೆ ಮೂಲಕ ಎಲ್ಲಾ ಭಾಗಗಳಲ್ಲಿ ಸಮರ್ಪಕ ವಿದ್ಯುತ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು,".


    ಗೌರವ ಗುಪ್ತ, ಅಪರ ಮುಖ್ಯ ಕಾರ್ಯದರ್ಶಿಗಳು, ಇಂಧನ ಇಲಾಖೆ




    ಶ್ರೀ ಕಾಯಕಯೋಗಿ ಸಿದ್ದರಾಮೇಶ್ವರ 853 ನೇ ಜಯಂತೋತ್ಸವ ಕಾರ್ಯಕ್ರಮ

    ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆ &ಕೃಷಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಕೆ ಸಚಿವ ಕೆ.ಜೆ.ಜಾರ್ಜ್‌

    ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆ &ಕೃಷಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಕೆ ಸಚಿವ ಕೆ.ಜೆ.ಜಾರ್ಜ್‌

    ಶ್ರೀ ಕಾಯಕಯೋಗಿ ಸಿದ್ದರಾಮೇಶ್ವರ 853 ನೇ ಜಯಂತೋತ್ಸವ  ಕಾರ್ಯಕ್ರಮ

     ತರೀಕೆರೆ ತಾಲೂಕು ಆಡಳಿತ ಕಚೇರಿ ವತಿಯಿಂದ ಶ್ರೀ ಕಾಯಕಯೋಗಿ ಸಿದ್ದರಾಮೇಶ್ವರ 

    853 ನೇ ಜಯಂತೋತ್ಸವ  ಕಾರ್ಯಕ್ರಮ ಏರ್ಪಡಿಸಿಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾನ್ಯ

     ಉಪ ವಿಭಾಗಾಧಿಕಾರಿಗಳಾದ  ಶ್ರೀ ನಟೇಶ್,ಹಾಗೂ ತಹಶೀಲ್ದಾರ್ ವಿಶ್ವಜಿತ್ ಮಹೇತ ಮತ್ತು

     ಬೋವಿ ಸಮಾಜದ ಎಲ್ಲಾ ಮುಖಂಡರುಗಳ ಸೇರಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್

     ರವರ ಪುತ್ತಳಿಗೆ ಪುಷ್ಪ ಮಾಲೆ  ಹಾಕುವ ಮುಖಾಂತರ ಮತ್ತು ಇಮ್ಮಡಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ

     ಪುಷ್ಪ ಅರ್ಚನೆ ಹಾಗೂದೀಪ ಬೆಳಗುವ ಮುಖಾಂತರ  ಕಾರ್ಯಕ್ರಮವನ್ನು  ನೆರವೇರಿಸಲಾಯಿತು ಈ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ರೀ ನಟೇಶ್,ತಹಶೀಲ್ದಾರ್ ವಿಶ್ವಜಿತ್ ಮಹೇತ ಹಾಗು.ಬಿ.ಜಿ.

    ಗೌರೀಶ,ಭೋವಿ ಸಮಾಜದ ಮುಖಂಡರು.ಹಾಗೂ ರಮೇಶ,ರಕ್ಷಣ ವೇದಿಕೆ ಜಿಲ್ಲಾಧ್ಯಕ್ಷರು ಚಿಕ್ಕಮಗಳೂರು

    ದುರ್ಗಾಭೋವಿ,ಪರಶುರಾಮಭೋವಿ,ಜಯಭೋವಿ,ಸಂತೋಷ,ಈಶ ಮತ್ತು ಸಾರ್ವಜನಿಕರು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


    ಸಪಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ ಮಾಡಿ-- ವಿಎನ್ ನಟೇಶ್...

    ಸಪಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ ಮಾಡಿ-- ವಿಎನ್ ನಟೇಶ್................

    ಸಪಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ ಮಾಡಿ-- ವಿಎನ್ ನಟೇಶ್................

    ಪೌರಕಾರ್ಮಿಕರಿಗೆ ಸಪಾಯಿ ಕರ್ಮಚಾರಿಗಳಿಗೆ ಅಭಿವೃದ್ಧಿ ಮಂಡಳಿಯಿಂದ ವಸತಿ ನಿರ್ಮಿಸಿ ಹಕ್ಕು ಪತ್ರ ನೀಡಬೇಕೆಂದು ಉಪ ವಿಭಾಗಾಧಿಕಾರಿ ವಿಎ ನಟೇಶ್ 


    ಸಪಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ ಮಾಡಿ-- ವಿಎನ್ ನಟೇಶ್................ ತರೀಕೆರೆ, ಜ, 17-- ಪೌರಕಾರ್ಮಿಕರಿಗೆ ಸಪಾಯಿ ಕರ್ಮಚಾರಿಗಳಿಗೆ  ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 

    ಸಪಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ ಮಾಡಿ-- ವಿಎನ್ ನಟೇಶ್................

    ಪೌರಕಾರ್ಮಿಕರಿಗೆ ಸಪಾಯಿ ಕರ್ಮಚಾರಿಗಳಿಗೆ ಅಭಿವೃದ್ಧಿ ಮಂಡಳಿಯಿಂದ ವಸತಿ ನಿರ್ಮಿಸಿ ಹಕ್ಕು ಪತ್ರ ನೀಡಬೇಕೆಂದು ಉಪ ವಿಭಾಗಾಧಿಕಾರಿ ವಿಎ ನಟೇಶ್ 


    ಸಪಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ ಮಾಡಿ-- ವಿಎನ್ ನಟೇಶ್................ ತರೀಕೆರೆ, ಜ, 17-- ಪೌರಕಾರ್ಮಿಕರಿಗೆ ಸಪಾಯಿ ಕರ್ಮಚಾರಿಗಳಿಗೆ  ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ವಸತಿ ನಿರ್ಮಿಸಿ ಹಕ್ಕು ಪತ್ರ ನೀಡಬೇಕೆಂದು ಉಪ ವಿಭಾಗಾಧಿಕಾರಿ ವಿಎ ನಟೇಶ್ ರವರು ಹೇಳಿದರು. ಅವರು ಇಂದು ಪಟ್ಟಣದ ಉಪ ವಿಭಾಗ ಅಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಉಪ ವಿಭಾಗ ಮಟ್ಟದ ಸಪಾಯ ಕರ್ಮಚಾರಿಗಳ ಪುನರ್ವಸತಿ ಸಭೆಯಲ್ಲಿ ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರು ಹಾಗೂ ಸಮಿತಿ ಸದಸ್ಯರಾದ ತರೀಕೆರೆಯನ್ ವೆಂಕಟೇಶ್ ರವರು ಪೌರಕಾರ್ಮಿಕರಿಗೆ ಹಾಗೂ ಸಪಾಯ ಕರ್ಮಚಾರಿಗಳು ವಾಸವಾಗಿರುವ ಕೊಳಚೆ ಪ್ರದೇಶಗಳಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ವಸತಿ ವ್ಯವಸ್ಥೆ ಮಾಡಿಲ್ಲ ಎಂದು ಸಭೆಯಲ್ಲಿ ದೂರಿದರು. ಈ ಕುರಿತು ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪ ವಿಭಾಗ ಅಧಿಕಾರಿಗಳು ಕೊಳಚೆ ಅಭಿವೃದ್ಧಿ ಮಂಡಳಿಯ ಜಿಲ್ಲಾ ಅಭಿಯಂತರರಾದ ಯಶವಂತ್ ರವರಿಗೆ ತಿಳಿಸುತ್ತಾ ತರೀಕೆರೆ ಅಂಬೇಡ್ಕರ್ ನಗರ, ಬಾಪೂಜಿ ಕಾಲೋನಿ ಕಡೂರು ಅಂಬೇಡ್ಕರ್ ನಗರ ಮತ್ತು ಸುಭಾಷ್ ನಗರ ಹಾಗೂ ಅಜ್ಜಂಪುರ,ಎನ್ ಆರ್ ಪುರ,ಬೀರೂರು ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆ ಕುರಿತು ಹೇಳಿದರು. ಇದೇ ಸಂದರ್ಭದಲ್ಲಿ ತರೀಕೆರೆ ಉಪ ವಿಭಾಗ ಮಟ್ಟದ  ಆಸ್ಪತ್ರೆಯ ಸ್ವಚ್ಛತಾ ಕರ್ಮಚಾರಿಗಳಿಗೆ ಸುರಕ್ಷತಾ ಪರಿಹಾರಗಳು ನೀಡಬೇಕು ವಿಶ್ರಾಂತಿ ಗೃಹ ನೀಡಬೇಕು ಮತ್ತು ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ವೇತನ ಪಾವತಿಸಬೇಕು ಸರ್ಕಾರಿ ಎಲ್ಲಾ ರಜೆಗಳನ್ನು ನೀಡಬೇಕು ಎಂದು ಸದಸ್ಯರಾದ ತರೀಕೆರೆ ಎನ್ ವೆಂಕಟೇಶ್,ಎಂ ವಿ ಭವಾನಿ, ಸಚಿನ್,ಜಿ ಟಿ ರಮೇಶ್ ಅವರು ತಿಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ನೀಡಿರುವ ಆದೇಶವನ್ನು ಪಾಲಿಸಲು ತಿಳಿಸಿದರು. ಸಭೆಯಲ್ಲಿ ತರೀಕೆರೆ ತಹಸಿಲ್ದಾರ್  ವಿಶ್ವಜಿತ್ ಮೆಹ್ತಾ ಅಜ್ಜಂಪುರ ತಹಶೀಲ್ದಾರ್ ವಿನಾಯಕ ಸಾಗರ್ ಕಡೂರು ತಹಸೀಲ್ದಾರ್  ಪೂರ್ಣಿಮಾ ಎನ್ ಆರ್ ಪುರ ತಹಶೀಲ್ದಾರ್ ನೂರುಲ್ ಉದಾ ಮತ್ತು ತರೀಕೆರೆ ಪುರಸಭಾ ಮುಖ್ಯ ಅಧಿಕಾರಿಗಳಾದ ರಂಜನ್ ಬೀರೂರು ಮುಖ್ಯ ಅಧಿಕಾರಿಗಳಾದ ಪ್ರಕಾಶ್ ಎನ್ಆರ್ ಪುರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಾದ ಮಂಜುನಾಥ್ ಅಜ್ಜಂಪುರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಾದ ರಮೇಶ್ ಕಡೂರು ಪುರಸಭಾ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳಾದ ಚಂದ್ರಶೇಖರ್ ಪತ್ರಕರ್ತರಾದ ಎಸ್ ಕೆ ಸ್ವಾಮಿ ಮುಂತಾದವರು ಉಪಸ್ಥಿತರಿದ್ದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್ ಮಂಜುನಾಥ್ ಸ್ವಾಗತಿಸಿ ವಂದಿಸಿದರು.

    ಶಿವಮೊಗ್ಗ ಜಿಲ್ಲಾ ಘಟಕದ ವತಿಯೀಂದ ಸೊರಬ ಪ್ರವಾಸಿ ಮಂದಿರದಲ್ಲಿ ಕ್ಯಾಲೆಂಡರ್ ಬಿಡುಗಡೆ

    ಶಿವಮೊಗ್ಗ ಜಿಲ್ಲಾ ಘಟಕದ ವತಿಯೀಂದ ಸೊರಬ ಪ್ರವಾಸಿ ಮಂದಿರದಲ್ಲಿ ಕ್ಯಾಲೆಂಡರ್ ಬಿಡುಗಡೆ

    ಸೊರಬ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ವಿತರಕ ಶರತ್ ಸ್ವಾಮಿರವರ ನೇತೃತ್ವದಲ್ಲಿ ಕ್ಯಾಲೆಂಡರ್  ಬಿಡುಗಡೆಗ


    ಸೊರಬ: ರಾಜ್ಯ ಪತ್ರಿಕಾ  ವಿತರಕರ ಒಕ್ಕೂಟ (ರಿ) ಶಿವಮೊಗ್ಗ ಜಿಲ್ಲಾ ಘಟಕದ ವತಿಯೀಂದ ಸೊರಬ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ವಿತರಕ ಶರತ್ ಸ್ವಾಮಿ ನೇತೃತ್ವದಲ್ಲಿ ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಲಾಯಿತು.  ಪತ್ರಕರ್ತರ ಸಂ

    ಶಿವಮೊಗ್ಗ ಜಿಲ್ಲಾ ಘಟಕದ ವತಿಯೀಂದ ಸೊರಬ ಪ್ರವಾಸಿ ಮಂದಿರದಲ್ಲಿ ಕ್ಯಾಲೆಂಡರ್ ಬಿಡುಗಡೆ

    ಸೊರಬ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ವಿತರಕ ಶರತ್ ಸ್ವಾಮಿರವರ ನೇತೃತ್ವದಲ್ಲಿ ಕ್ಯಾಲೆಂಡರ್  ಬಿಡುಗಡೆಗ


    ಸೊರಬ: ರಾಜ್ಯ ಪತ್ರಿಕಾ  ವಿತರಕರ ಒಕ್ಕೂಟ (ರಿ) ಶಿವಮೊಗ್ಗ ಜಿಲ್ಲಾ ಘಟಕದ ವತಿಯೀಂದ ಸೊರಬ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ವಿತರಕ ಶರತ್ ಸ್ವಾಮಿ ನೇತೃತ್ವದಲ್ಲಿ ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಲಾಯಿತು.  ಪತ್ರಕರ್ತರ ಸಂಘದ ಅಧ್ಯಕ್ಷ ತೋಟಪ್ಪ ಜಿ.ಎಂ ಮಾತನಾಡಿ, ಪತ್ರಿಕಾ ವಿತರಕರು ಪತ್ರಿಕಾ ರಂಗದ ಅವಿಭಾಗ್ಯ ಅಂಗವಾಗಿದ್ದು, ಪತ್ರಿಕೆ ಮುದ್ರಣದ ಶ್ರಮಕ್ಕೆ ಪ್ರತಿಫಲ ಸಿಗಲು ವಿತರಕರ ಪಾತ್ರ ಮಹತ್ತರವಾಗಿದೆ ಎಂದರು.

    ಮಾಜಿ ಅಧ್ಯಕ್ಷ ಬಣ್ಣದಬಾಬು ಮಾತನಾಡಿ, ಜನರಿಗೆ ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೇ ಮನೆಮನೆಗೆ ಪತ್ರಿಕೆ ಮುಟ್ಟಿಸುವ ಕಾರ್ಯ ಅನನ್ಯ ಎಂದರು. ಪತ್ರಿಕಾ ವಿತರಕ ರಘುನಾಥ ಬಾಪಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶರತ್ ಸ್ವಾಮಿ, ರಾಘವೇಂದ್ರ ಬಾಪಟ್, ನೋಪಿಶಂಕರ, ರವಿ ಕಲ್ಲಂಬಿ, ಚಂದ್ರಪ್ಪ, ಹೆಚ್.ಕೆ.ಬಿ ಸ್ವಾಮಿ,ಜೆ.ಎಸ್ ಚಿದಾನಂದಗೌಡ ಮತ್ತಿತರರಿದ್ದರು.

    ಕನ್ನಡಿಗರ ಮೇಲೆ ಹಲ್ಲೆ ಗಡಿ ಬಂದ್ ಮಾಡಲು ಚಿಂತನೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ

    ಕನ್ನಡಿಗರ ಮೇಲೆ ಹಲ್ಲೆ ಗಡಿ ಬಂದ್ ಮಾಡಲು ಚಿಂತನೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ

            ಕನ್ನಡಿಗರ ಮೇಲೆ ಹಲ್ಲೆ ಗಡಿ ಬಂದ್ ಮಾಡಲು ಚಿಂತನೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ


    ಶಬರಿಮಲೆಗೆ ತೆರಳುತ್ತಿದ್ದ ಕನ್ನಡಿಗರ ವಾಹನದಲ್ಲಿದ್ದ ಕನ್ನಡ ಬಾವುಟವನ್ನು ತೆಗೆಯುವಂತೆ ತಮಿಳುನಾಡಿನಲ್ಲಿರುವ ಕೆಲವು ಗುಂಡಗಳ ಗುಂಪು ಆಗ್ರಹಿಸಿ ಕನ್ನಡಿಗ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸ

            ಕನ್ನಡಿಗರ ಮೇಲೆ ಹಲ್ಲೆ ಗಡಿ ಬಂದ್ ಮಾಡಲು ಚಿಂತನೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ


    ಶಬರಿಮಲೆಗೆ ತೆರಳುತ್ತಿದ್ದ ಕನ್ನಡಿಗರ ವಾಹನದಲ್ಲಿದ್ದ ಕನ್ನಡ ಬಾವುಟವನ್ನು ತೆಗೆಯುವಂತೆ ತಮಿಳುನಾಡಿನಲ್ಲಿರುವ ಕೆಲವು ಗುಂಡಗಳ ಗುಂಪು ಆಗ್ರಹಿಸಿ ಕನ್ನಡಿಗ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ 


     ತಮಿಳಿಗರು ಮತ್ತು ಕನ್ನಡಿಗರು ಕರ್ನಾಟಕದಲ್ಲಿ ಸೋದರ ಭಾವದಿಂದ ಬಾಳುತ್ತಿರುವಾಗ, ತಮಿಳುನಾಡಿನಲ್ಲಿನ ಕೆಲವು ಗುಂಡಗಳು  ಕನ್ನಡಿಗ ಪ್ರಯಾಣಿಕರನ್ನು ಗುರಿಯಾಗಿಸಿ ಹಲ್ಲೆ ನಡೆಸುವುದು, ಕನ್ನಡಿಗರ ಅಸ್ಮಿತೆಯಾದ ಕೆಂಪು ಹಳದಿ ಬಾವುಟವನ್ನು ಅವಮಾನಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ 

    ಇದೆ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಕರ್ನಾಟಕ ತಮಿಳುನಾಡು ಗಡಿ ಬಂದ್ ಮಾಡಲು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ 


    ತಮಿಳುನಾಡಿನ ಚುನಾವಣೆ ಸನಿಹದಲ್ಲಿರುವಾಗ ಇಂತಹ ಪ್ರಾದೇಶಿಕ ದ್ವೇಷವನ್ನೂ ಅಸ್ತ್ರವಾಗಿಸಿಕೊಳ್ಳುವ ಹುನ್ನಾರ ಇದರಲ್ಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಕ್ಷಣವೇ ತಮಿಳುನಾಡು ಮುಖ್ಯಮಂತ್ರಿಗಳಿಗೆ ಘಟನೆಯ ಕುರಿತು ಕ್ರಮ ಕೈಗೊಳ್ಳುವಂತೆ, ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಆಗ್ರಹಿಸಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ

    ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 14 ಬಂಗಾರದ 24 ಬಳ್ಳಿ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ 

    ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 14 ಬಂಗಾರದ ಪದಕಗಳು 24 ಬಳ್ಳಿ 

    ಪದಕಗಳು ಹಾಗೂ 37 ಕಂಚಿನ ಪದಕಗಳು ಬೆಳೆಸಿದ್ದ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಶಿವಮೊಗ್ಗ 


     ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ

    ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ 

    ನ್ಯಾಷನಲ್ ಪಬ್ಲಿಕ್

    ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ 

    ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 14 ಬಂಗಾರದ ಪದಕಗಳು 24 ಬಳ್ಳಿ 

    ಪದಕಗಳು ಹಾಗೂ 37 ಕಂಚಿನ ಪದಕಗಳು ಬೆಳೆಸಿದ್ದ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಶಿವಮೊಗ್ಗ 


     ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ

    ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ 

    ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.


    ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಒಟ್ಟು 14 ಬಂಗಾರದ ಪದಕಗಳು, 24 ಬೆಳ್ಳಿ ಪದಕಗಳು ಹಾಗೂ 37 ಕಂಚಿನ ಪದಕಗಳನ್ನು ಗಳಿಸಿದ್ದು, ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.


    ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ ನವೀನಾ ಎಂ. ಪೈಸ್, ಶಾಲಾ ಮ್ಯಾನೇಜ್ಮೆಂಟ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


    ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ


    ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

    ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗ


    ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

    ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಯಿತು.  ಸಭೆಯನ್ನುದ್ದೇಶಿಸಿ ಬಿಜೆಪಿ ಮುಖಂಡ ಹಾಗೂ ಸಂಚಾಲಕ ಡಾಕ್ಟರ್ ಜ್ಞಾನೇಶ್ ಹೆಚ್.ಈ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಟ್ಟಬದ್ಧ ಹಿತಾಸಕ್ತಿಗಳು ಹಾಗೂ ಹಿಂದೂ ವಿರೋಧಿ ಶಕ್ತಿಗಳು ಸಂಘಟಿತವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದು, ಧರ್ಮಸ್ಥಳದ ಗೌರವ ಹಾಗೂ ಘನತೆಗೆ ಧಕ್ಕೆ ತರುವಂತ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವುದರೊಂದಿಗೆ ಸಮಾಜದ ಶಾಂತಿ-ಸೌಹಾರ್ದತೆಗೂ ಧಕ್ಕೆ ತರುತ್ತಿದೆ. ಹಿಂದೂ ಪರಂಪರೆಯ ನಾವೆಲ್ಲರೂ ಸ್ವಾಭಿಮಾನಿಗಳಾಗಿದ್ದೇವೆ. ಅಂದು ಸೋಮನಾಥ, ವಿಶ್ವನಾಥ ಇಂದು ಮಂಜುನಾಥನ ಅಸ್ವಿತ್ವವನ್ನೇ ಪ್ರಶ್ನಿಸಲು ಮುಂದಾಗಿದ್ದಾರೆ. ಘಜ್ನಿ ಸಂತತಿಯವರು ಅಂದೂ, ಇಂತಹ ಸಂತತಿಗೆ ನಾವೆಲ್ಲರೂ ವಿಚಲಿತರಾಗಬೇಕಿಲ್ಲ ಎಂದರು.

    ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜು ಎಂ ತಲ್ಲೂರು ಮಾತನಾಡಿ, ಇಂದು ನಾವು ಧರ್ಮದ ಉಳಿವಿಗಾಗಿ ಹೋರಾಟ ನಡೆಸುವ ಹೋರಾಟ ಹಿಂದೂ ವಿರೋಧಿಗಳಿಗೆ ಇದು ಎಚ್ಚರಿಕೆಯ ಘಂಟೆ. ಧರ್ಮಸ್ಥಳ ನಮಗೆ ಕಲಿಸಿದ್ದು ಧರ್ಮ, ಆಸ್ತಿಕತೆ. ಪ್ರತಿ ಭಕ್ತ ಹಸಿವನ್ನು ತೀರಿಸುವ ಕ್ಷೇತ್ರ ಧರ್ಮಸ್ಥಳ. ಇಂತಹ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಅತಿದೊಡ್ಡ ಷಡ್ಯಂತ್ರವಾಗಿದೆ. ಹಿಂದೂಗಳ ವಿರುದ್ಧ ಇದೇ ರೀತಿ ಮುಂದುವರೆದರೆ ದೇಶಾದ್ಯಂತ ಹೋರಾಟ ನಡೆಸಬೇಕಾಗುತ್ತದೆ. ರಾಜ್ಯ ಸರ್ಕಾರವು ಈ ಷಡ್ಯಂತ್ರಕ್ಕೆ ಒಳಗಾಗದೇ ನಮ್ಮ ಹಿಂದುತ್ವವನ್ನು ಉಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದರು.

    ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಮಾತನಾಡಿ ಈ ಷಡ್ಯಂತ್ರದ ಪಿತೂರಿ ಮಾಡಿರುವ ಸಮಾಜ ಘಾತುಕರ ವಿರುದ್ಧ ಹಾಗೂ ರಾಷ್ಟçವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಮಂಡಲ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಮಾತನಾಡಿದರು.

    ಪ್ರಮುಖರಾದ ದೇವೇಂದ್ರಪ್ಪ ಚನ್ನಾಪುರ, ಪ್ರಕಾಶ್ ತಲಕಾಲಕೊಪ್ಪ, ಪಾಣಿರಾಜಪ್ಪ, ವಿಜೇಂದ್ರ ತಲಗುಂದ, ಸುರೇಶ್ ಉದ್ರಿ, ಡಿ. ಶಿವಯೋಗಿ, ಉಮೇಶ್ ಉಡುಗಣಿ, ಗೀತಾ ಮಲ್ಲಿಕಾರ್ಜುನ, ಜಾನಕಪ್ಪ ಒಡೆಯರ್, ಹೊಳಿಯಮ್ಮ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಭಕ್ತಾದಿಗಳು, ಹಿಂದೂಪರ ಸಂಘಟನೆಯವರು ಪಾಲ್ಗೊಂಡಿದ್ದರು.



    ನಮ್ಮ ತಂಡ

    ವಿಜಯಪುರ ಜಿಲ್ಲಾ ವರದಿಗಾರರು

    Established in 2005, arakshakavaninews has been the go-to source for the latest news and trends in the newspaper and magazine industry. Our journey began with a small team of journalists who shared a passion for storytelling and a desire to inform and engage readers. Over the years, we have grown and expanded our team, but our commitment to delivering high-quality content has never wavered.

    Our Values

    At arakshakavaninews, we value integrity, accuracy, and creativity. We are committed to providing our readers with truthful and unbiased information, and we strive to be a trusted source of news and information for our community. We believe that great content is a result of hard work, dedication, and a willingness to take risks and try new things.

    Our Team

    Our Team

    Our team is made up of talented journalists, editors, and designers who are passionate about their work. We are dedicated to delivering the best possible content to our readers, and we take pride in the quality of our work. We believe that our team is our greatest asset, and we are committed to investing in their professional development and growth.

    ನಮ್ಮ ತಂಡ

    Our Philosophy

    Sustainability Efforts

    Diversity in Media

    At arakshakavaninews, we believe in the transformative power of news. Our philosophy revolves around transparency, integrity, and the pursuit of truth.

    Diversity in Media

    Sustainability Efforts

    Diversity in Media

    We celebrate diversity at arakshakavaninews. Our newsroom is a melting pot of ideas and perspectives, ensuring a well-rounded representation of news.

    Sustainability Efforts

    Sustainability Efforts

    Sustainability Efforts

    As a responsible news organization, arakshakavaninews is committed to sustainability. We are continuously looking for ways to minimize our environmental impact.

    Behind the Pages: A Look at the People and Stories Behind the Headlines

      My Blog

      ತರೀಕೆರೆ ರಾಜ್ಯ ಮಟ್ಟದ ಜಂಗಿ ಬಯಲು ಕುಸ್ತಿ ಸ್ಪರ್ಧೆ

      ತರೀಕೆರೆ : ಪುರಸಭಾ ಸದಸ್ಯ ಲೋಕಾಯುಕ್ತ ಬಲೆಗೆ.

      ತರೀಕೆರೆ : ಪುರಸಭಾ ಸದಸ್ಯ ಲೋಕಾಯುಕ್ತ ಬಲೆಗೆ.

      ತರೀಕೆರೆ ರಾಜ್ಯಮಟ್ಟದ ಜಂಗಿ ಬಯಲು ಕುಸ್ತಿ ಸ್ಪರ್ಧೆ

      What's something exciting your business offers? Say it here.

      Close the deal

      Give customers a reason to do business with you.

      Video

      Grab interest

      Say something interesting about your business here.

      Generate excitement

      What's something exciting your business offers? Say it here.

      Video

      Grab interest

      Say something interesting about your business here.

      Generate excitement

      What's something exciting your business offers? Say it here.

      Contact Us

      What are you thinking about?

      Have a story idea for us? Would you like to write for us? 

      Send us a message and let us know what you are thinking about.

      Message us on WhatsApp

      arakshakavaninews

      Bhovi Colony, 3rd cross, Kodi camp, Tarikere taluk, Chikkamagaluru Dist., Bhovi colony/Lingadahalli main road, Tarikere, KA 577228

      +91 9880958680

      Hours

      Mon

      12:00 am – 12:00 am

      Tue

      12:00 am – 12:00 am

      Wed

      12:00 am – 12:00 am

      Thu

      12:00 am – 12:00 am

      Fri

      12:00 am – 12:00 am

      Sat

      12:00 am – 12:00 am

      Sun

      12:00 am – 12:00 am

      Social

      Subscribe

      Sign up to get each issue delivered straight to your inbox.


      Copyright © 2026 arakshakavaninews - All Rights Reserved.

      Powered by

      This website uses cookies.

      We use cookies to analyze website traffic and optimize your website experience. By accepting our use of cookies, your data will be aggregated with all other user data.

      Accept